ದಾವಣಗೆರೆ, ಆ. 22 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ “ದೀಕ್ಷಾ ಭೂಮಿ ಯಾತ್ರಾ” ವಿಶೇಷ ಬಸ್ಸು ಮತ್ತು ರೈಲು ಸೌಲಭ್ಯ ಕಲ್ಪಿಸಲಾಗುತ್ತಿದೆ.
Join Whatsapp Group NammaDavangere 04
Join Whatsapp Group NammaDavangere 05
ಇದಕ್ಕಾಗಿ ಯಾತ್ರಾರ್ಥಿಗಳು ಆನ್ಲೈನ್ ಮೂಲಕ ನೊಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in ಮೂಲಕ ಆಗಸ್ಟ್ 25ರಿಂದ ಸೆಪ್ಟೆಂಬರ್ 9ರವರೆಗೆ ನೊಂದಾಯಿಸಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ನಾಗರಾಜ್ ತಿಳಿಸಿದ್ದಾರೆ.
ನೊಂದಾಯಿಸಿಕೊಂಡ ನಂತರ ಯಾತ್ರಾರ್ಥಿಗಳಿಗೆ ಇಲಾಖೆಯ ವತಿಯಿಂದ ನೀಡಲಾಗುವ ಸಾರಿಗೆ ವ್ಯವಸ್ಥೆಯ ಕುರಿತು ಮಾಹಿತಿ ನೀಡಲಾಗುವುದು.



