ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ “ಮಾಸ್ಕ್ ಮ್ಯಾನ್”ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಗುರುತು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಪತ್ತೆಯಾಗಿದ್ದು, ತಲೆಬುರುಡೆ ತಂದ ಪ್ರಕರಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ.
Join Whatsapp Group NammaDavangere 04
Join Whatsapp Group NammaDavangere 05
ಬಂಧಿತನನ್ನು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಯಲಿದೆ. ಎಸ್ಐಟಿ ಮೂಲಗಳ ಪ್ರಕಾರ, ಚಿನ್ನಯ್ಯ ವಿರುದ್ಧ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
ಹಿನ್ನೆಲೆ:
ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ “ಮಾಸ್ಕ್ ಮ್ಯಾನ್” ನೀಡಿದ್ದ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. 14 ಸ್ಥಳಗಳಲ್ಲಿ ಅಗೆದ ವೇಳೆ ಒಂದೆಡೆ ಅಸ್ಥಿಪಂಜರ ಪತ್ತೆಯಾ ಗಿದ್ದವು, ಆದರೆ ಆ ಅಸ್ಥಿಪಂಜರ ಗಳನ್ನು ಅಪರಾಧಿ ಚೆನ್ನನೇ ತೆಗೆದುಕೊಂಡು ಬಂದಿದ್ದನು ಎಂಬುದು ಗೊತ್ತಾಗಿದೆ. ನಂತರ ಉತ್ಖನನ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
“ಮಾಸ್ಕ್ ಮ್ಯಾನ್” ಚೆನ್ನ ವಿಚಾರಣೆಯಲ್ಲಿ ಹಲವು ಅಂಶಗಳು ಬೆಳಕಿಗೆ ಬಂದಿದ್ದರೂ, ಇತ್ತೀಚೆಗೆ ಅವನ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ “ದೂರುದಾರ ಹೇಳಿಕೆಗಳು ಸುಳ್ಳು” ಎಂದು ಬಾಯಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.




