ದುರ್ಗಾದೇವಿಯನ್ನು ಆರಾಧಿಸುವ ಹಬ್ಬ ನವರಾತ್ರಿಯ ಮಹತ್ವವೇನು?

ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ನವರಾತ್ರಿ ಎಂದರೆ ನವದುರ್ಗೆಯರನ್ನು ಪೂಜಿಸುವ ಹಬ್ಬ. ದುಷ್ಟರನ್ನು ಶಿಕ್ಷಿಸಲು, ಶಿಷ್ಟರನ್ನು ರಕ್ಷಿಸಲು ಶಕ್ತಿ ಸ್ವರೂಪಿಣಿಯಾದ ದುರ್ಗೆಯು ಒಂಭತ್ತು ಅವತಾರಗಳನ್ನು ತಾಳುತ್ತಾಳೆ.

ದುರ್ಗಾದೇವಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಒಂಭತ್ತು ದಿನಗಳ ಕಾಲ ಭಾರತದಾದ್ಯಂತ ನಡೆಯುವ ಹಬ್ಬ ಇದಾಗಿದ್ದು, ಕರ್ನಾಟಕದಲ್ಲಿ ನವರಾತ್ರಿಯನ್ನು ದಸಾರವೆಂದು ಕರೆದರೆ, ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಯೆಂದು ಆಚರಿಸಲ್ಪಡುತ್ತದೆ. ನವರಾತ್ರಿಯೆಂದರೆ ಒಂಭತ್ತು ರಾತ್ರಿಗಳು, ದೇವಿಯ ಒಂಭತ್ತು ವಿಧದ ರೂಪಗಳನ್ನು ಒಂಭತ್ತು ದಿನಗಳಲ್ಲಿ ಆರಾಧಿಸಲಾಗುತ್ತದೆ.

ನವರಾತ್ರಿಯ ಹಿನ್ನಲೆ

ಪರಶಿವನ ಪತ್ನಿಯಾದ ದುರ್ಗಾಮಾತೆಯು ಅತ್ಯಂತ ಶಕ್ತಿಶಾಲಿಯಾದ ದೇವತೆಯಾಗಿದ್ದು, ಆದಿಶಕ್ತಿ ಎಂದು ಕರೆಯಲ್ಪಡುತ್ತಾಳೆ. ಆದಿ ಶಕ್ತಿಯನ್ನು ಕಾಳಿ, ಪಾರ್ವತಿ, ಗೌರಿ, ಸತಿ, ಮಹಾಮಾಯೆ ಹಾಗೂ ಮಹಿಷಾಸುರ ಮರ್ದಿನಿ ಮುಂತಾದ ವಿವಿಧ ರೂಪಗಳಲ್ಲಿ ಆರಾಧಿಸಲಾಗುತ್ತದೆ.

ಪುರಾಣಗಳಲ್ಲಿ ಹೇಳುವಂತೆ, ಮಹಿಷಾಸುರನೆಂಬ ಎಮ್ಮೆ ರೂಪದ ಅಸುರನು ತನ್ನ ಸೈನ್ಯದೊಂದಿಗೆ ದೇವಲೋಕಕ್ಕೆ ದಾಳಿ ಮಾಡಿ, ದೇವತೆಗಳನ್ನು ಹೊರಗೆ ಅಟ್ಟಿದನಂತೆ. ಆಗ ದೇವತೆಗಳೆಲ್ಲರೂ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರರನ್ನು ಕಾಪಾಡುವಂತೆ ಕೇಳಿಕೊಂಡಾಗ, ಮೂರು ತ್ರಿಮೂರ್ತಿಗಳೂ ತಮ್ಮ ದೇಹದ ಶಕ್ತಿಯನ್ನೆಲ್ಲ ಸೇರಿಸಿ, ದೇವತೆಯನ್ನು ಸೃಷ್ಟಿಸಿದರು. ಎಲ್ಲಾ ದೇವರ ಶಕ್ತಿಯು ಸೇರಿ ದೇವಿಯು ದುರ್ಗೆಯ ಅವತಾರವೆತ್ತಿದಳು.
ಶಕ್ತಿಗಳ ಸಂಗಮದಿಂದ ಆದ ದುರ್ಗಾ ದೇವಿಯ ಅವತಾರದಲ್ಲಿ ದೇವಿಯು 10 ಕೈಗಳನ್ನು ಹೊಂದಿರುವ ಸುಂದರವಾದ ಸ್ತ್ರೀಯಾಗಿ ಹುಟ್ಟಿದ ನಂತರ ದೇವತೆಗಳೆಲ್ಲ ಆಕೆಗೆ ಉಡುಗೊರೆಯನ್ನು
ನೀಡಿದರು.

ಈಶ್ವರನು ತ್ರಿಶೂಲವನ್ನು, ವಿಷ್ಣುವು ಚಕ್ರವನ್ನು, ವರುಣ ದೇವನು ಪಾಶವನ್ನು, ಇಂದ್ರನು ವಜ್ರಾಯುಧವನ್ನು ಹಾಗೂ ವಾಯುವು ಬಾಣಗಳನ್ನು ದುರ್ಗೆಗೆ ನೀಡಿದರು. ವಸ್ತ್ರಗಳನ್ನು ಮತ್ತು ವಾಹನವಾದ ಸಿಂಹವನ್ನು ಪರ್ವತಗಳ ರಾಜ ಹಿಮವಂತನು ನೀಡಿದನು. ಎಲ್ಲಾ ಆಯುಧಗಳಿಂದ ಸನ್ನದ್ಧಳಾದ ದೇವಿಯು ಯುದ್ಧಕ್ಕೆ ಸಿದ್ಧಳಾಗಿ ಅಸುರ ಸೈನ್ಯದ ಮೇಲೆ ಆಕ್ರಮಣ ಮಾಡಿದಳು.
ಒಂಭತ್ತು ದಿನಗಳ ಕಾಲ ನಡೆದ ಈ ಯುದ್ಧದಲ್ಲಿ ಮಹಿಷಾಸುರನನ್ನು ದೇವಿಯು ತನ್ನ ಸಿಂಹ ಹಾಗೂ ಆಯುಧಗಳ ಸಹಾಯದಿಂದ ಸಂಹರಿಸಿದಳು. ದುರ್ಗೆಯು ಮಹಿಷಾಸುರನನ್ನು ವಧಿಸಿದ ದಿನವೇ ವಿಜಯ ದಶಮಿ.

ದುರ್ಗೆಯ ಒಂಭತ್ತು ಅವತಾರಗಳು
ದುಷ್ಟರ ಸಂಹಾರಕ್ಕಾಗಿ, ಶಿಷ್ಟರ ರಕ್ಷಣೆಗಾಗಿ ನವ ಅವತಾರಗಳನ್ನು ಎತ್ತಿ, ಅಸುರರನ್ನು ಸಂಹರಿಸಿದ ಶಕ್ತಿ ರೂಪಿಣಿಯೇ ದುರ್ಗಾದೇವಿ. ನವರಾತ್ರಿಯ ಒಂಭತ್ತೂ ದಿನಗಳಲ್ಲಿ ನವದುರ್ಗೆಯರನ್ನಿಟ್ಟು ಪೂಜಿಸಲಾಗುತ್ತದೆ.

ಶೈಲ ಪುತ್ರಿ

ನವರಾತ್ರಿಯ ಮೊದಲನೇ ದಿನವನ್ನು ಪ್ರತಿಪಾದ ಎಂದು ಕರೆಯುತ್ತಾರೆ.ಈ ದಿನ ಶೈಲಪುತ್ರಿಯ ರೂಪವನ್ನು ಪೂಜಿಸಲಾಗುತ್ತದೆ. ಶೈಲಪುತ್ರಿಯೆಂದರೆ ಪರ್ವತರಾಜನ ಮಗಳು ಎಂದರ್ಥ, ಈಶ್ವರನ ಪತ್ನಿಯಾಗಿಯೂ ಶೈಲ ಪುತ್ರಿಯನ್ನು ಆರಾಧಿಸಲಾಗುತ್ತದೆ.
ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಪತಿಯಾದ ಶಿವನನ್ನು ತಂದೆಯು ಅವಮಾನ ಮಾಡಿದ್ದಕ್ಕಾಗಿ ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದುಪ್ರಾಣಾರ್ಪಣೆಗೈಯುತ್ತಾಳೆ. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆಯುತ್ತಾಳೆ. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿ ಹೋದ. ದೇವಿ ಶೈಲ ಪುತ್ರಿಯು ಕಾಡಿಗೆ ಹೋಗಿ 16ವರ್ಷ ಕಠಿಣ ತಪಸ್ಸಿನಲ್ಲಿ ತೊಡಗಿ ನಂತರ ಶಿವನನ್ನು ಪಡೆದಳು

ಬ್ರಹ್ಮಚಾರಿಣಿ

ಚಂದ್ರ ಘಂಟ ದೇವಿ

ಕೂಷ್ಮಾಂಡ ದೇವಿ

ಚತುರ್ಥಿ ಅಥವಾ ನಾಲ್ಕನೇ ದಿನದಂದು ದೇವಿಯು ಕೂಷ್ಮಾಂಡಿನಿಯ ಅವತಾರವೆತ್ತುತ್ತಾಳೆ. ಕೂಷ್ಮಾಂಡಿನಿಯನ್ನು ಈ ಭೂಮಿಯ ಸೃಷ್ಟಿಕರ್ತೆ ಎಂದು ಹೇಳಲಾಗುತ್ತದೆ. ಎಂಟು ಭುಜಗಳಿರುವ ಕಾರಣ ಅಷ್ಟಭುಜಾದೇವಿ ಎಂದು ಕರೆಯಲಾಗುತ್ತದೆ.
ಸೃಷ್ಟಿಯ ಅಸ್ತಿತ್ವವೇ ಇಲ್ಲದಿರುವಾಗ ಎಲ್ಲೆಡೆ ಅಂಧಕಾರವೇ ಪಸರಿಸಿತ್ತು. ಆಗ ಇದೇ ದೇವಿಯು ತನ್ನ ‘ಈಶತ್‌’ ಹಾಸ್ಯದಿಂದ ಬ್ರಹ್ಮಾಂಡವನ್ನು ಸೃಷ್ಟಿಸುತ್ತಾಳೆ. ಆದ್ದರಿಂದ ಇವಳೇ ಸೃಷ್ಟಿಯ ಆದಿ- ಸ್ವರೂಪ ಶಕ್ತಿಯಾಗಿದ್ದಾಳೆ.

ಸ್ಕಂದ ಮಾತೆ

ನವರಾತ್ರಿಯ ಐದನೇ ದಿನದಂದು ದುರ್ಗೆಯ ಐದನೇ ಅವತಾರವಾಗಿರುವ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದ ಎಂದರೆ ಕಾರ್ತಿಕೇಯ ಅಥವಾ ಮುರುಗನ್‌. ಕಾರ್ತಿಕೇಯನ ತಾಯಿಯೇ ಸ್ಕಂದ ಮಾತೆ. ಕಾರ್ತಿಕೇಯನನ್ನು ತನ್ನ ತೊಡೆಯ ಮೇಲೆ ಕೂರಿಸಿರುವ ರೂಪದಲ್ಲಿ ಈ ದೇವಿಯು ಕಾಣಿಸಿಕೊಳ್ಳುತ್ತಾಳೆ.

ಕಾತ್ಯಾಯಿನಿ

ನವರಾತ್ರಿಯ ಆರನೇ ದಿನ ಕಾತ್ಯಾಯಿನಿಯನ್ನು ಆರಾಧಿಸಲಾಗುತ್ತದೆ. ಒಮ್ಮೆ ಕಾತ್ಯಾಯನ್‌ ಎನ್ನುವ ಋಷಿಯು ಪಾರ್ವತಿ ದೇವಿಯಂತಹ ಮಗಳನ್ನು ಪಡೆಯಬೇಕು ಎಂದು ಆಶಿಸಿ ಭಕ್ತಿಯಿಂದ ತಪಸ್ಸನ್ನು ಮಾಡುತ್ತಾನೆ. ಋಷಿಯ ಭಕ್ತಿಗೆ ಮೆಚ್ಚಿದ ದುರ್ಗಾ ಮಾತೆಯು ಆಶೀರ್ವಾದ ಮಾಡುತ್ತಾಳೆ. ಅಂತೆಯೇ ಮಗಳು ಹುಟ್ಟಿದ ಮೇಲೆ ಕಾತ್ಯಾಯಿನಿ ಎಂದು ಹೆಸರಿಟ್ಟರು. ಕಾತ್ಯಾಯಿನಿಯು ದೊಡ್ಡವಳಾದ ನಂತರ ತನ್ನ ಹತ್ತು ಕೈಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ದುಷ್ಕೃತ್ಯ ಎಸಗುವ ರಾಕ್ಷಸರ ನಾಶ ಮಾಡಲು ಜಗತ್ತನ್ನು ಸುತ್ತಲು ಪ್ರಾರಂಭಿಸಿದಳು. ದುಷ್ಟ ರಾಕ್ಷಸರ ಸಂಹಾರಕ್ಕಾಗಿ ದುರ್ಗಾದೇವಿಯು ಅವತರಿಸಿ ಬಂದಳು ಎಂದು ಹೇಳಲಾಗುತ್ತದೆ.

ಕಾಳ ರಾತ್ರಿ

ನವರಾತ್ರಿಯ ಏಳನೇ ದಿನದಂದು ತಾಯಿ ಕಾಲರಾತ್ರಿಯನ್ನು ಪೂಜಿಸಲಾಗುವುದು. ಈ ರೂಪದಲ್ಲಿ ತಾಯಿಯು ತುಂಬಾ ರೌದ್ರಾವತಾರ ಮತ್ತು ಕಪ್ಪಾಗಿ ಕಾಣುತ್ತಾಳೆ. ಹೆಸರೇ ಹೇಳುವಂತೆ ಇದು ತಾಯಿಯ ಕರ್ಗತ್ತಲು ಮತ್ತು ಸಮಯದ ರೂಪವಾಗಿದೆ.

ರೌದ್ರಾವತಾರ ಮತ್ತು ತುಂಬಾ ಉಗ್ರ ರೂಪದಲ್ಲಿರುವ ದುರ್ಗೆಯು ಕಾಲರಾತ್ರಿಯ ರೂಪ ಧಾರಣೆ ಮಾಡಿ, ತನ್ನ ಬಂಗಾರದ ಮೈಬಣ್ಣದ ಚರ್ಮವನ್ನು ಕಿತ್ತು ರಾಕ್ಷಸರ ವಿರುದ್ಧ ಹೋರಾಡಲು ಹೋಗುತ್ತಾಳೆ. ಕಾಳರಾತ್ರಿಯು ಎಲ್ಲಾ ರೀತಿಯ ದುಷ್ಟಶಕ್ತಿ, ದುಷ್ಟತೆ ಮತ್ತು ನಕಾರಾತ್ಮಕ ಶಕ್ತಿ ಹಾಗೂ ಭೀತಿ ದೂರ ಮಾಡುತ್ತಾಳೆ. ಕಾಲರಾತ್ರಿಯು ತನ್ನ ಭಕ್ತರಿಗೆ ಹೆಚ್ಚಿನ ಸಂತೋಷ ಹಾಗೂ ತೃಪ್ತಿ ಕರುಣಿಸುವುದರಿಂದಾಗಿ ಆಕೆಯನ್ನು ಶುಭಾಂಕರಿ ಅಥವಾ ಪವಿತ್ರವೆಂದು ಪರಿಗಣಿಸಲಾಗಿದೆ.

ಮಹಾ ಗೌರಿ

ನವರಾತ್ರಿಯ ಎಂಟನೇ ದಿನದಂದು ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಮಹಾಗೌರಿಯು ತನ್ನ 16ನೇ ವಯಸ್ಸಿನ ಯೌವ್ವನೆಯಾಗಿ ಕಾಣಿಸಿಕೊಳ್ಳುತ್ತಾಳೆ. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುವನ್ನು ಹಿಡಿಕೊಂಡಿರುತ್ತಾಳೆ.
ತಾಯಿ ದುರ್ಗೆಯು ಭೂಮಿಯ ಮೇಲೆ ಜನ್ಮವನ್ನು ಪಡೆದು, ಮರಳಿ ದೇವಲೋಕಕ್ಕೆ
ನವರಾತ್ರಿಯ ಎಂಟನೇ ದಿನದಂದು ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಮಹಾಗೌರಿಯು ತನ್ನ 16ನೇ ವಯಸ್ಸಿನ ಯೌವ್ವನೆಯಾಗಿ ಕಾಣಿಸಿಕೊಳ್ಳುತ್ತಾಳೆ. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುವನ್ನು ಹಿಡಿಕೊಂಡಿರುತ್ತಾಳೆ.
ತಾಯಿ ದುರ್ಗೆಯು ಭೂಮಿಯ ಮೇಲೆ ಜನ್ಮವನ್ನು ಪಡೆದು, ಮರಳಿ ದೇವಲೋಕಕ್ಕೆ ಹೋಗಿ ಶಿವನನ್ನು ಮದುವೆಯಾಗಲು ಬಯಸುತ್ತಾಳೆ. ನಾರದರ ಸಲಹೆಯಂತೆ ಶಿವನನ್ನು ಒಲಿಸಿಕೊಳ್ಳಲು ತಪಸ್ಸು ಮಾಡುತ್ತಾಳೆ. ಆಕೆ ಸಂಪೂರ್ಣವಾಗಿ ತಪಸ್ಸಿನಲ್ಲಿ ಮಗ್ನವಾಗಿ ಆಹಾರ, ನೀರನ್ನು ತ್ಯಜಿಸಿರುವ ಸಮಯದಲ್ಲಿ ಆಕೆಯ ದೇಹದಲ್ಲಿ ಧೂಳು, ಕೊಳೆ ತುಂಬಿಕೊಳ್ಳುತ್ತದೆ. ಬಿಸಿಲಿನಿಂದಾಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗುತ್ತದೆ. ಸಾಔಇರಾರು ವರ್ಷಗಳ ತಪಸ್ಸಿನ ನಂತರ ಶಿವನು ಆಕೆಯಿಂದ ಪ್ರಭಾವಿತನಾಗಿ ಆಕೆಯ ದೇಹವನ್ನು ಹೊಳೆಯುವಂತೆ ಮಾಡಲು ಗಂಗೆಯನ್ನು ಹರಿಯಲು ಬಿಡುತ್ತಾನೆ. ಇದರಿಂದಾಗಿ ಗೌರಿಯು ಕಾಂತಿಯುತವಾಗಿ, ಶ್ವೇತವರ್ಣದಲ್ಲಿ ಧ್ಯಾನಾಸಕ್ತಳಾಗಿ ಕಾಣುತ್ತಾಳೆ.

ಸಿದ್ಧಿಧಾತ್ರಿ

ನವಮಿಯಂದು ದುರ್ಗೆಯು ಒಂಭತ್ತನೇ ಅವತಾರವಾದ ಸಿದ್ಧಿಧಾತ್ರಿಯ ರೂಪದಲ್ಲಿರುತ್ತಾಳೆ. ಸಿದ್ಧಿಧಾತ್ರಿ ದೇವಿಯು ತ್ರಿಮೂರ್ತಿಗಳಾಗಿರುವ ಬ್ರಹ್ಮ, ವಿಷ್ಣು, ಮಹೇಶ್ವರರಿಗೆ ಆಧ್ಯಾತ್ಮಿಕ ವೈಭವ ಹಾಗೂ ಪರಿಪೂರ್ಣತೆ ನೀಡುತ್ತಾಳೆ. ಅಷ್ಟ ಮಹಾಸಿದ್ಧಿಯನ್ನು ನಿರ್ಮಿಸಿ ಅದನ್ನು ತ್ರಿಮೂರ್ತಿಗಳಿಗೆ ನೀಡುತ್ತಾಳೆ. ತಾಯಿ ಸಿದ್ಧಿಧಾತ್ರಿಯು ಪರಿಪೂರ್ಣತೆ, ಎಲ್ಲಾ ರೀತಿಯ ಶಕ್ತಿ, ವೈಭವ ಮತ್ತು ಮಹಿಮೆಯ ಮೂಲ.

ಹೀಗೆ ನವರಾತ್ರಿಯ ಒಂಭತ್ತೂ ದಿನಗಳಲ್ಲಿ ನವದುರ್ಗೆಯರನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ ಎನ್ನಲಾಗುತ್ತದೆ.

Related Posts

ದೀಪಾವಳಿ ಪೂಜಾ ಮುಹೂರ್ತಗಳು

ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.M. 9353488403 ದಿನಾಂಕ: 18-10-2025 ಶನಿವಾರಗುರುದ್ವಾದಶಿ ಸಂಜೆ ಯಮನಿಗೆ ಮನೆಯ ಬಾಗಿಲಿನ ಹೊರಗೆ ದಕ್ಷಿಣಕ್ಕೆ ಮುಖಮಾಡಿ 10 ದೀಪಗಳನ್ನು ಉರಿಸಬೇಕು. ದಿನಾಂಕ: 19-10-2025 ರವಿವಾರಧನ ತ್ರಯೋದಶಿ-ನೀರು ತುಂಬುವ ಹಬ್ಬ…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 07 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಶುಕ್ರವಾರದ ರಾಶಿ ಭವಿಷ್ಯ 06 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಗುರುವಾರದ ರಾಶಿ ಭವಿಷ್ಯ 05 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಬುಧವಾರದ ರಾಶಿ ಭವಿಷ್ಯ 04 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಮಂಗಳವಾರದ ರಾಶಿ ಭವಿಷ್ಯ 03 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಸೋಮವಾರದ ರಾಶಿ ಭವಿಷ್ಯ 02 ಮಾರ್ಚ್ 2026

ಭಾನುವಾರದ ರಾಶಿ ಭವಿಷ್ಯ 01 ಮಾರ್ಚ್ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶನಿವಾರದ ರಾಶಿ ಭವಿಷ್ಯ 28 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಶುಕ್ರವಾರದ ರಾಶಿ ಭವಿಷ್ಯ 27 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026

ಗುರುವಾರದ ರಾಶಿ ಭವಿಷ್ಯ 26 ಫೆಬ್ರವರಿ 2026
×