ನಮ್ಮ ದಾವಣಗೆರೆ ಜು. 28: ದಾವಣಗೆರೆ ನಗರದ ಹೈಸ್ಕೂಲ್ ಮೈದಾನಲ್ಲಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ ಹಿಂದೂ ಮಹಾಗಣಪತಿ ಧ್ವಜ ಸ್ತಂಭದ ಪೂಜೆ ಸಲ್ಲಿಸಲಾಯಿತು. ಈ ಭಾರಿ ವಾರಣಾಸಿಯ ಶ್ರೀಕಾಶಿ ವಿಶ್ವನಾಥ ದೇವಸ್ಥಾನ ಮಾದರಿಯ ಮಹಾ ಮಂಟಪ ನಿರ್ಮಿಸಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಹಿಂದೂಪರ ಸಂಘಟನೆಗಳು, ಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜೊಳ್ಳೇ ಗುರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.





