ದಾವಣಗೆರೆ, ಜುಲೈ 29 : ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕಂಬಳ, ಎತ್ತಿನ ಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ.
ಪ್ರಸಕ್ತ ಆರ್ಥಿಕ ವರ್ಷದ ಬಜೆಟ್ನಲ್ಲಿ ಕಂಡಿಕೆ ಸಂಖ್ಯೆ 397ರ ಅನ್ವಯ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇವುಗಳನ್ನು ಆಯೋಜಿಸಲು ಮುಂದಾಗುವ 15 ಸಂಘ-ಸಂಸ್ಥೆಗಳಿಗೆ ತಲಾ ರೂ.2 ಲಕ್ಷಗಳಂತೆ ಅನುದಾನವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಮಂಜೂರು ಮಾಡಲಾಗುವುದು.
Join Whatsapp Group NammaDavangere 04
Join Whatsapp Group NammaDavangere 05
ದಾವಣಗೆರೆ ಜಿಲ್ಲೆಯಲ್ಲಿ ಎತ್ತಿನ ಬಂಡಿ ಓಟವನ್ನು ಆಯೋಜಿಸಲು ಆಸಕ್ತಿ ಇರುವ ಸಂಘ-ಸಂಸ್ಥೆಗಳು ತಮ್ಮ ಪೂರ್ಣ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಆಗಸ್ಟ್ 2 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08192-237490ನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




