ನಮ್ಮ ದಾವಣಗೆರೆ ಜೂನ್.22: ರಾಜ್ಯ ಯುವನೀತಿ-2012ರ ಅನುಷ್ಟಾನದಡಿ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಸರ್ಕಾರದಿಂದ ಪ್ರೋತ್ಸಾಹವಾಗಿ ತಲಾ ರೂ.1.00 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು.
Join Whatsapp Group NammaDavangere 04
Join Whatsapp Group NammaDavangere 05
ಪ್ರೋತ್ಸಾಹಧನದಲ್ಲಿ ರೂ.10 ಸಾವಿರ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90 ಸಾವಿರ ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಖರೀದಿ ಮಾಡಲು ನೀಡಲಾಗುತ್ತದೆ. ಇದರಡಿ ಪ್ರೋತ್ಸಾಹಧನ ಪಡೆಯ ಬಯಸುವ ಸರ್ಕಾರಿ ಶಾಲೆಗಳು ಆಯಾ ಜಿಲ್ಲೆಯ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಒಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಲಾಗುವುದು.
ಈ ಸಂಬಂಧ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ತಮ್ಮ ಶಾಲೆಗಳ ಕ್ರೀಡಾಪಟುಗಳ ಸಾಧನೆ ವಿವರ, ಪ್ರಶಸ್ತಿ ಪತ್ರಗಳು, ಶಾಲೆಯ ದಾಖಲೆಗಳು, ದೈಹಿಕ ಶಿಕ್ಷಕರ ಬ್ಯಾಂಕ್ ಪಾಸ್ ಬುಕ್ ಹಾಗೂ ಮುಖ್ಯೋಪಾಧ್ಯಾಯರ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರ ಜಂಟಿ ಖಾತೆ ಪಾಸ್ ಬುಕ್ ನಕಲು ಪ್ರತಿಗಳನ್ನು ಜೂನ್ 25ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08192-237480 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.




