ನಾಯಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಲು ಸಂತಾನಹರಣ ಚಿಕತ್ಸೆ ಕೈಗೊಳ್ಳಲು ಸೂಚನೆ

ನಮ್ಮ ದಾವಣಗೆರೆ ಸೆ.10: ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.

ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಿ, ಕರೆ ಬಂದ ಕೂಡಲೇ ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಬೀದಿನಾಯಿ, ಸಾಕು ನಾಯಿಗಳಿಗೆ ಎಆರ್‍ಯು ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು. ಮನೆ ಮನೆಗೆ ತೆರಳಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನ್ ನೀಡಬೇಕು. ಎಬಿಸಿ ಕಾರ್ಯಕ್ರಮ ಮಾಡಲು ನಗರಾಭಿವೃದ್ದಿ ಕೋಶ, ಮಹಾನಗರಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲಾ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನ ಹರಣ ಚಿಕಿತ್ಸೆ ನೀಡುವಂತೆ ತಿಳಿಸಿದರು.

Join Whatsapp Group NammaDavangere 04
Join Whatsapp Group NammaDavangere 05

ಪ್ರಕರಣದ ಆಧಾರದ ಮೇರೆಗೆ ಗಂಭೀರ ಅನಾರೋಗ್ಯ ಅಥವಾ ಮಾರಣಾಂತಿಕವಾಗಿ ಗಾಯಗೊಂಡ ಅಥವಾ ಹುಚ್ಚುರೋಗ ಪೀಡಿತ ನಾಯಿಗಳನ್ನು ಸೋಡಿಯಂ ಪೆಂಟಾಥಾಲ್ ಬಳಸಿ ನೋವುರಹಿತ ವಿಧಾನದಲ್ಲಿ ದಯಾಮರಣ ನೀಡಬೇಕು. ಬೇರೆ ಯಾವುದೇ ವಿಧಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿ ಪ್ರಾಣಿಯನ್ನು ದಯಾಮರಣಕ್ಕೆ ಒಳಪಡಿಸಲು ಲಿಖಿತವಾಗಿ ಕಾರಣಗಳನ್ನು ದಾಖಲಿಸಬೇಕು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲಸೌಕರ್ಯಗಳು ಇರಬೇಕು. ಹೊಸ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುವ ಮೊದಲು ಉದ್ದೇಶಿತ ಪ್ರದೇಶದಲ್ಲಿ ನಾಯಿಗಳ ಜನನ ನಿಯಂತ್ರಣವನ್ನು ಹಂತ ಹಂತವಾಗಿ ಕೈಗೊಳ್ಳಲು ಮೂಲಸೌಕರ್ಯವನ್ನು ವಿನ್ಯಾಸಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ನಾಯಿಗಳಿಗೆ ಉಚಿತ ಲಸಿಕೆ ಹಾಕಲು ಲಸಿಕಾ ಅಭಿಯಾನವನ್ನು ಸೆ.28 ರಿಂದ ಅ.27 ರವರೆಗೆ ಹಮ್ಮಿಕೊಳ್ಳಲಾಗಿದೆ. ಹಾಗೂ ಶಾಲೆಗಳಲ್ಲಿ ಪಶುಪಾಲನಾ ಇಲಾಖೆಯಿಂದ ರೇಬಿಸ್ ಅರಿವು ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದರು.

ಜಿ.ಪಂ ಸಿಇಓ ಗಿತ್ತೆ ಮಾಧವ್ ವಿಠ್ಠಲ್ ರಾವ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಪಶುಪಾಲನಾ ಇಲಾಖೆ ಡಿಡಿ. ಡಾ;ಮಹೇಶ್.ಹೆಚ್.ಎಂ, ಡಿಹೆಚ್‍ಓ ಡಾ;ಷಣ್ಮುಖಪ್ಪ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ಉಪಸ್ಥಿತರಿದ್ದರು.

Related Posts

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026

ಈ ರಾಶಿಯವರಿಗೆ ದಂಪತಿ ಕಲಹಗಳು ಕೊನೆಗೊಳ್ಳುವುದು ಯಾವಾಗ?ಅಂತೂ ಇಂತೂ ಈ ರಾಶಿಯವರ ಕಂಕಣ ಬಲ ಕೂಡಿ ಬಂತು, ಬುಧವಾರದ ರಾಶಿ ಭವಿಷ್ಯ 18 ಫೆಬ್ರವರಿ 2026 ಸೂರ್ಯೋದಯ – 6:44 ಬೆ.ಸೂರ್ಯಾಸ್ತ – 6:15 ಸಂಜೆ ಶಾಲಿವಾಹನ ಶಕೆ -1947ಸಂವತ್-2081ವಿಶ್ವಾವಸು ನಾಮ…

Leave a Reply

Your email address will not be published. Required fields are marked *

You Missed

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 21 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಸೋಮವಾರದ ರಾಶಿ ಭವಿಷ್ಯ 20 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಭಾನುವಾರದ ರಾಶಿ ಭವಿಷ್ಯ 19 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಗುರುವಾರದ ರಾಶಿ ಭವಿಷ್ಯ 16 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಬುಧವಾರದ ರಾಶಿ ಭವಿಷ್ಯ 15 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 14 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಭಾನುವಾರದ ರಾಶಿ ಭವಿಷ್ಯ 12 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಗುರುವಾರದ ರಾಶಿ ಭವಿಷ್ಯ 09 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಬುಧವಾರದ ರಾಶಿ ಭವಿಷ್ಯ 08 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026

ಮಂಗಳವಾರದ ರಾಶಿ ಭವಿಷ್ಯ 07 ಜುಲೈ 2026
×