
ಬಿಜೆಪಿ ಅವಧಿಯಲ್ಲಿ ಲೆಕ್ಕವಿಲ್ಲದಷ್ಟು ಹಗರಣಗಳಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 42.16 ಕೋಟಿ ರೂ. ಎಪಿಎಂಸಿ ದೊಡ್ಡ ಹಗರಣವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಸಚಿವರಾಗಿದ್ದಾಗ ಭೋವಿ ನಿಗಮಕ್ಕೆ 87 ಕೋಟಿ ರೂ. ಹಗರಣ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಬಿಜೆಪಿ ಹಾಗೂ ಜೆಡಿಎಸ್ ಸಂಸದರು ಕಾಂಗ್ರೆಸ್ ಮೇಲೆ ಟೀಕೆ ಮಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣದ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಸಚಿವರಾಗಿದ್ದಾಗ ಭೋವಿ ನಿಗಮದ 87 ಕೋಟಿ ರೂ. ಅದೊಂದು ಹಗರಣ. ದೇವರಾಜು ಅರಸ್ ಟ್ರಕ್ ಟರ್ಮಿನಲ್ನಲ್ಲಿ 47.10 ಕೋಟಿ ರೂ. ಅದು ಇನ್ನೊಂದು ಹಗರಣ. ಅದಕ್ಕೆ ತಾನೇ ಆಗಿನ ಅಧ್ಯಕ್ಷರಾಗಿದ್ದ ವೀರಯ್ಯ ಬಂಧನವಾಗಿದ್ದರು ನಿಮ್ಮ ಯೋಗ್ಯತೆಗೆ ನಿಮಿಗೆ ನಾಚಿಕೆ ಆಗಲ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಬಡವರ ಹಾಗೂ ಹಿಂದುಳಿದ ಜನರ ಕೋಟ್ಯಂತರ ರೂಪಾಯಿ ಲೂಟಿಮಾಡಿದ್ದೀರಿ ಆದರೆ ಇಡಿ, ಐಟಿ ಮತ್ತು ಸಿಬಿಐ ಲೂಟಿಕೋರರನ್ನು ಬಂಧಿಸಲು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಜಯನಗರ ಮತ್ತು ಬಸವನಗುಡಿಯಲ್ಲಿ ಬೀದಿ ಬದಿಯ ಕೆಲ ಕಳ್ಳರು ಹಾಗೂ ದರೋಡೆಕೋರರು ವಿಧಾನಸೌಧ, ಸಂಸತ್ ಗೂ ಆಯ್ಕೆಯಾಗಿ ಹೋಗಿದ್ದಾರೆ, ನಿಮಗೆ ನಾಚಿಕೆ ಆಗಬೇಕು ಎಂದರು.
ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧದ ಭೂ ವಂಚನೆ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ, ಕೃಷಿ ಇಲಾಖೆ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಕೃಷಿ ಸಚಿವರಾಗಿದ್ದ ಬಿ. ಸಿ. ಪಾಟೀಲ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ನಿಗಮಗಳಲ್ಲಿ 437 ಕೋಟಿ ರೂ. ಹಗರಣವಾಗಿದೆ. ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಚಿವರಾಗಿದ್ದಾಗ ಕಿಯೋನಿಕ್ಸ್ ನಲ್ಲಿ 500 ಕೋಟಿ ರೂ. ಹಗರಣ ನಡೆದಿದೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.
ಕರ್ನಾಟಕ ಬಿಜೆಪಿ ಭ್ರಷ್ಟಾಚಾರದ ಪಿತಾಮಹ. ನಮ್ಮ ಹಗರಣಗಳು ಬಯಲಾಗಬಾರದು ಎಂದು ಸಧನದಲ್ಲಿ ಗಲಾಟೆ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷಗಳು ಇಷ್ಟು ಕೆಟ್ಟದಾಗಿ ನಡೆದುಕೊಂಡಿದ್ದನ್ನು ನಾನು ನೋಡಿಲ್ಲ. ಕೇಂದ್ರ ಹಾಗೂ ಆರ್ಎಸ್ಎಸ್ ಪ್ರಚೋದನೆಯಿಂದ ಕೇವಲ ಪ್ರಚಾರಕ್ಕಾಗಿ ಕರ್ನಾಟಕ ಬಿಜೆಪಿ ಇಂತಹ ಗಲಾಟೆ ಮಾಡುತ್ತಿದ್ದಾರೆ.
ಬಿಜೆಪಿ ಕಾಲದ 21 ಹಗರಣಗಳ ತನಿಖೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.