ಬೆಂಗಳೂರಿನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರನ್ನು ಇಂದು ಬಂಧಿಸಲಾಗಿದೆ. ಪವಿತ್ರಾ ಗೌಡ ಸೇರಿ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

47 ವರ್ಷದ ನಟನನ್ನು ಮೈಸೂರಿನ ಅವರ ಫಾರ್ಮ್ಹೌಸ್ನಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಯಿತು. ಬೆಂಗಳೂರಿನ ಸುಮನಹಳ್ಳಿ ಸೇತುವೆ ಬಳಿ ರೇಣುಕಾ ಸ್ವಾಮಿ (33) ಶವವಾಗಿ ಪತ್ತೆಯಾಗಿದ್ದಾರೆ. ಚಿತ್ರದುರ್ಗದ ಅಪೋಲೋ ಫಾರ್ಮಸಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಪವಿತ್ರಾ ಗೌಡ ರವರಿಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದರು ಎಂಬ ಆರೋಪವಿದೆ.
ನಿನ್ನೆ ಮೂವರು ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದು, ನಟ ದರ್ಶನ್ ಅವರ ಸೂಚನೆ ಮೇರೆಗೆ ಈ ಕೃತ್ಯ ಎಸಗಿರುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ಸ್ವಾಮಿಯ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು ಆದರೆ ಪೊಲೀಸ್ 2 ದಿನ ಕಾಯುವಂತೆ ಹೇಳಿದ್ದರು. ಜೂನ್ 9 ರಂದು ಕೊಲೆ ನಡೆದಿದ್ದು, ನಂತರ ಪ್ರಕರಣ ದಾಖಲಾಗಿತ್ತು. ಸ್ವಾಮಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಟನನ್ನು ಬಂಧಿಸಲಾಗಿದೆ.
ಕೊಲೆಯಲ್ಲಿ ನಟ ನೇರವಾಗಿ ಭಾಗಿಯಾಗಿದ್ದಾನೋ ಅಥವಾ ಪಿತೂರಿಯ ಭಾಗವಾಗಿದ್ದಾನೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.




