ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

ಕೆರೆಯಲ್ಲಿನ ಮಣ್ಣನ್ನು ರೈತರ ಜಮೀನುಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿ, ಮಣ್ಣು ತೆಗೆಯಲು ಸ್ಥಳವನ್ನು ಗುರುತು ಮಾಡಿಕೊಡುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಸೋಮವಾರ (ಏ.7) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆ ಒತ್ತುವರಿ ತೆರವು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆ ಕಾಲದಲ್ಲಿ ಕೆರೆಯ ಮಣ್ಣನ್ನು ರೈತರ ಜಮೀನುಗಳಿಗೆ ನೀಡುವುದರಿಂದ ಹೂಳೆತ್ತಿದಂತಾಗುತ್ತದೆ. ಮತ್ತು ಮಳೆಗಾಲದಲ್ಲಿ ಕೆರೆಯಲ್ಲಿ ನೀರಿನ ಸಂಗ್ರಹ ಹೆಚ್ಚು ಮಾಡಲು ಅವಕಾಶ ಇದ್ದು ರೈತರ ತೋಟ, ಜಮೀನುಗಳಿಗೆ ಹೊಸ ಮಣ್ಣು ಹಾಕವುದರಿಂದ ಬೆಳೆಯು ಉತ್ತಮವಾಗಿ ಬಂದು ರೈತರಿಗೂ ಅನುಕೂಲ, ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿರುವುದರಿಂದ ಸ್ವಯಂ ಪ್ರೇರಿತವಾಗಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿ ಸಣ್ಣ ನೀರಾವರಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ, ಜಿಲ್ಲಾ ಪಂಚಾಯತ್ ಕೆರೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಜಾಗ ಗುರುತಿಸಿ ರೈತರಿಗೆ ಹೂಳೆತ್ತಲು ಅವಕಾಶ ಮಾಡುವ ಕೆಲಸ ಮಾಡಬೇಕೆಂದು ತಿಳಿಸಿದರು.

ಕೆರೆ ಒತ್ತುವರಿ ತೆರವಿಗೆ ಕ್ರಮ; ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ವ್ಯಾಪ್ತಿಯಲ್ಲಿ 538 ಕೆರೆಗಳಿದ್ದು ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ 72 ಕೆರೆಗಳಿವೆ. ಮತ್ತು ಶಾಂತಿಸಾಗರ ಮತ್ತು ಇತರೆ ನೀರಿನ ಸಂಗ್ರಹವಾಗುವ 22 ಕೆರೆಗಳು ಜಲಸಂಪನ್ಮೂಲ ಇಲಾಖೆಗೆ ಬರಲಿದ್ದು ಉಳಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಹಾಗೂ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳಾಗಿವೆ. ಈ ಕೆರೆಗಳ ಒತ್ತುವರಿಯನ್ನು ತೆರವು ಮಾಡಲೇಬೇಕು.

ಶಾಂತಿಸಾಗರ ಕೆರೆಯು 5447.10 ಎಕರೆಯಷ್ಟಿದ್ದು ಇದರಲ್ಲಿ 280 ಎಕರೆಯಷ್ಟು ಒತ್ತುವರಿಯಾಗಿದೆ. ಈ ಕೆರೆ 45 ಕಿ.ಮೀ ಸುತ್ತಳತೆಯನ್ನು ಹೊಂದಿರುತ್ತದೆ. ಈ ಕೆರೆಯ ಒತ್ತುವರಿಯನ್ನು ತೆರವು ಮಾಡಲು ತಹಶೀಲ್ದಾರರು ಹಾಗೂ ಜಲಸಂಪ್ಮೂಲ ಇಲಾಖೆಯವರು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 72 ಕೆರೆಗಳಿಂದ 10807.27 ಎಕರೆ ವಿಸ್ತೀರ್ಣವಿದೆ. 39 ಕೆರೆಗಳ ಅಳತೆ ಮಾಡಿದ್ದು 33 ಕೆರೆಗಳು ಬಾಕಿ ಇವೆ. ಇದರಲ್ಲಿ 21 ಕೆರೆಗಳಿಂದ 262 ಎಕರೆ ಒತ್ತುವರಿಯಾಗಿದೆ ಎಂದು ಗುರುತಿಸಿ 20 ಕೆರೆಗಳ 254 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಒತ್ತುವರಿ ತೆರವಿಗೆ 1 ಕೆರೆ ಬಾಕಿ ಇದೆ. ಜಗಳೂರು ಕೆರೆ ಒತ್ತುವರಿಯನ್ನು ತೆರವು ಮಾಡುವ ಪ್ರಕರಣ ಹೈಕೋರ್ಟ್‍ನಲ್ಲಿದ್ದು ಪುನರ್ ಪರಿಶೀಲಿಸಲು ಆದೇಶವಾಗಿರುವುದರಿಂದ ಮತ್ತೆ ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ತಹಶೀಲ್ದಾರ್‍ಗೆ ಸೂಚನೆ ನೀಡಿದರು.

ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣನವರ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಅಭಿಷೇಕ್, ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಆಟೋರಿಕ್ಷಾಗಳಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯ.

ನಮ್ಮ ದಾವಣಗೆರೆ ಮೇ. 23: ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು. Join Whatsapp Group NammaDavangere 04Join Whatsapp Group NammaDavangere…

ಸಣ್ಣ ಪುಟ್ಟ ವಿಷಯಗಳಿಗೂ ಸಾರ್ವಜನಿಕರು ಲೋಕಾಯುಕ್ತಕ್ಕೆ ಬರುವುದು ಸರಿಯಲ್ಲ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ದಾವಣಗೆರೆ ಏ. 24: ಸಣ್ಣ ಪುಟ್ಟ ವಿಷಯಗಳಿಗೂ ಸಾರ್ವಜನಿಕರು ಲೋಕಾಯುಕ್ತಕ್ಕೆ ಬರುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಕೆಲಸಗಳನ್ನು ಆತ್ಮಶ್ರದ್ಧೆಯಿಂದ ನಿರ್ವಹಿಸಬೇಕು. ಹಲವು ಕಚೇರಿಗಳಿಗೆ ಭೇಟಿ ನೀಡಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡು ಬಂದಿವೆ. ಒಮ್ಮೆ ನಾನು ತೀರ್ಪು ಬರೆಯಲು ಪೆನ್ನು ಹಿಡಿದರೆ,…

Leave a Reply

Your email address will not be published. Required fields are marked *

You Missed

ಶನಿವಾರದ ರಾಶಿ ಭವಿಷ್ಯ 14 ಜೂನ್ 2025

  • By admin
  • June 13, 2025
  • 13 views
ಶನಿವಾರದ ರಾಶಿ ಭವಿಷ್ಯ 14 ಜೂನ್ 2025

ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025

  • By admin
  • June 13, 2025
  • 18 views
ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025

ಗುರುವಾರದ ರಾಶಿ ಭವಿಷ್ಯ 12 ಜೂನ್ 2025

  • By admin
  • June 11, 2025
  • 34 views
ಗುರುವಾರದ ರಾಶಿ ಭವಿಷ್ಯ 12 ಜೂನ್ 2025

ಬುಧವಾರದ ರಾಶಿ ಭವಿಷ್ಯ 11 ಜೂನ್ 2025

  • By admin
  • June 10, 2025
  • 39 views
ಬುಧವಾರದ ರಾಶಿ ಭವಿಷ್ಯ 11 ಜೂನ್ 2025

ಮಂಗಳವಾರದ ರಾಶಿ ಭವಿಷ್ಯ 10 ಜೂನ್ 2025

  • By admin
  • June 10, 2025
  • 54 views
ಮಂಗಳವಾರದ ರಾಶಿ ಭವಿಷ್ಯ 10 ಜೂನ್ 2025

ಸೋಮವಾರದ ರಾಶಿ ಭವಿಷ್ಯ 09 ಜೂನ್ 2025

  • By admin
  • June 8, 2025
  • 73 views
ಸೋಮವಾರದ ರಾಶಿ ಭವಿಷ್ಯ 09 ಜೂನ್ 2025

ಶನಿವಾರದ ರಾಶಿ ಭವಿಷ್ಯ 07 ಜೂನ್ 2025

  • By admin
  • June 6, 2025
  • 79 views
ಶನಿವಾರದ ರಾಶಿ ಭವಿಷ್ಯ 07 ಜೂನ್ 2025

ಶುಕ್ರವಾರದ ರಾಶಿ ಭವಿಷ್ಯ 06 ಜೂನ್ 2025

  • By admin
  • June 6, 2025
  • 88 views
ಶುಕ್ರವಾರದ ರಾಶಿ ಭವಿಷ್ಯ 06 ಜೂನ್ 2025

ಕಾಲಮಿತಿಯಲ್ಲಿ ನಗರೋತ್ಥಾನ ಕಾಮಗಾರಿಗಳು ಮುಗಿಯಬೇಕು.

  • By admin
  • June 5, 2025
  • 68 views
ಕಾಲಮಿತಿಯಲ್ಲಿ ನಗರೋತ್ಥಾನ ಕಾಮಗಾರಿಗಳು ಮುಗಿಯಬೇಕು.

ಗುರುವಾರದ ರಾಶಿ ಭವಿಷ್ಯ 05 ಜೂನ್ 2025

  • By admin
  • June 4, 2025
  • 97 views
ಗುರುವಾರದ ರಾಶಿ ಭವಿಷ್ಯ 05 ಜೂನ್ 2025
×