ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ

ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಮತ್ತೊಮ್ಮೆ ತೆರೆದಿವೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ಉನ್ನತ ಶಿಕ್ಷಣಕ್ಕಾಗಿ ಈ ಅತಿದೊಡ್ಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4, 2025 ಆಗಿದೆ. 2022ನೇ ಇಸವಿಯಲ್ಲಿ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ 10 ವರ್ಷಗಳಲ್ಲಿ 50,000 ವಿದ್ಯಾರ್ಥಿವೇತನಗಳನ್ನು ಘೋಷಿಸಿದ್ದರು.

ರಿಲಯನ್ಸ್ ಫೌಂಡೇಷನ್ ಪದವಿ ಮಟ್ಟದಲ್ಲಿ 5,000 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವೀಧರರಿಗೆ 100 ವಿದ್ಯಾರ್ಥಿವೇತನಗಳನ್ನು ಒದಗಿಸುತ್ತದೆ. ಪದವೀಧರರಿಗೆ 2 ಲಕ್ಷ ರೂ.ಗಳವರೆಗೆ ಅನುದಾನ ನೀಡಲಾಗುತ್ತದೆ. ವಿದ್ಯಾರ್ಥಿವೇತನಕ್ಕಾಗಿ ವಿದ್ಯಾರ್ಥಿಗಳ ಆಯ್ಕೆಯು ಅವರ ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿರುತ್ತದೆ. ಮತ್ತೊಂದೆಡೆ, ಸ್ನಾತಕೋತ್ತರ ವಿದ್ಯಾರ್ಥಿವೇತನಗಳು ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನಗಳ ಆಯ್ದ ಕ್ಷೇತ್ರಗಳಲ್ಲಿ ಭಾರತದ ಅತ್ಯಂತ ಪ್ರತಿಭಾನ್ವಿತ 100 ವಿದ್ಯಾರ್ಥಿಗಳಿಗೆ ಹೋಗುತ್ತವೆ. ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಪ್ರಗತಿಗೆ ನಿರ್ಣಾಯಕ ಕ್ಷೇತ್ರಗಳಲ್ಲಿ ಮುಂದುವರಿದ ಅಧ್ಯಯನ ಮತ್ತು ಸಂಶೋಧನೆಗಾಗಿ ವಿದ್ಯಾರ್ಥಿಗಳು 6 ಲಕ್ಷ ರೂ.ಗಳವರೆಗೆ ಅನುದಾನವನ್ನು ಪಡೆಯುತ್ತಾರೆ. ಸಾಮಾಜಿಕವಾಗಿ, ಪರಿಸರ ದೃಷ್ಟಿಯಿಂದ ಮತ್ತು ಡಿಜಿಟಲ್ ವಿಚಾರದ ಆಲೋಚನೆ ಇರುವವರು ಹಾಗೂ ಭಾರತಕ್ಕಾಗಿ ದೊಡ್ಡದಾಗಿ ಯೋಚಿಸಬಲ್ಲ ಭವಿಷ್ಯದ ನಾಯಕರ ಗುಂಪನ್ನು ಬೆಳೆಸುವುದು ವಿದ್ಯಾರ್ಥಿವೇತನದ ಗುರಿಯಾಗಿದೆ.

Join Whatsapp Group NammaDavangere 04
Join Whatsapp Group NammaDavangere 05

ರಿಲಯನ್ಸ್ 29 ವರ್ಷಗಳಿಗೂ ಹೆಚ್ಚು ಕಾಲ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ರಿಲಯನ್ಸ್ ಇಲ್ಲಿಯವರೆಗೆ ವಿವಿಧ ಮಾರ್ಗಗಳ ಮೂಲಕ 28,000 ಕ್ಕೂ ಹೆಚ್ಚು ವಿದ್ಯಾರ್ಥಿವೇತನಗಳನ್ನು ನೀಡಿದೆ. ಫೌಂಡೇಷನ್ ಪ್ರಕಾರ, ವಿದ್ಯಾರ್ಥಿವೇತನ ಪಡೆದ ಹೆಚ್ಚಿನ ವಿದ್ಯಾರ್ಥಿಗಳು ಇಂದು ವೃತ್ತಿಪರ ಜೀವನದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ ಮತ್ತು ಭಾರತದ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. ವಿದ್ಯಾರ್ಥಿವೇತನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು scholarships.reliancefoundation.org ಗೆ ಭೇಟಿ ನೀಡಿ.

Related Posts

ಐಫೋನ್ ಗಾಗಿ ಜೀವವನ್ನೇ ಕಳೆದುಕೊಂಡ ಕುಟುಂಬ – ಇದು ಕೇವಲ ಸುದ್ದಿಯಲ್ಲ, ಎಚ್ಚರಿಕೆಯ ಗಂಟೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಎಲ್ಲರ ಮನಸ್ಸನ್ನು ಕಲಕುವಂತಿದೆ. “ಐಫೋನ್ ಕೊಡಿಸಲಿಲ್ಲ ಎಂದು ಯುವಕ ಸಾವಿಗೆ ಶರಣು, ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿಯೂ ಬಲಿ” ಎಂಬ ಶೀರ್ಷಿಕೆ ಕೇಳಿದರೆ ಯಾರಿಗಾದರೂ ಆಘಾತವಾಗುತ್ತದೆ.ಒಂದು ಮೊಬೈಲ್ ಫೋನ್ಗಾಗಿ ಇಡೀ ಕುಟುಂಬವೇ…

ಸ್ವದೇಶೀ ಬಳಿಸಿ – ದೇಶ ಉಳಿಸಿ

“ಸ್ವದೇಶೀ” ಎಂಬ ಪದವು ಕೇವಲ ಉತ್ಪನ್ನ ಅಥವಾ ವಸ್ತುವಿನ ಆಯ್ಕೆ ಅಲ್ಲ, ಅದು ನಮ್ಮ ರಾಷ್ಟ್ರಭಕ್ತಿಯ ಪ್ರತಿಬಿಂಬ, ದೇಶದ ಅಭಿವೃದ್ಧಿಗೆ ಕೊಡುವ ಒಂದು ಅಮೂಲ್ಯ ಕೊಡುಗೆ. “ಸ್ವದೇಶೀ” ಎಂದರೆ ಅದರಲ್ಲಿ ಸ್ವಾವಲಂಬನೆ, ಆತ್ಮಗೌರವ, ಆರ್ಥಿಕ ಶಕ್ತಿ ಮತ್ತು ರಾಷ್ಟ್ರೀಯ ಏಕತೆಯ ತತ್ವ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×