
ನಮ್ಮ ದಾವಣಗೆರೆ: ದಿನಾಂಕ:-27-01-2025 ರಂದು ಮಲೆಬೆನ್ನೂರು ಬಳಿ ಕೋಮಾರನಹಳ್ಳಿ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ರವರಾದ ಶ್ರೀಮತಿ ಪದ್ಮಶ್ರೀ ಗುಂಜಿಕರ್ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ
Join Whatsapp Group NammaDavangere 04
Join Whatsapp Group NammaDavangere 05
ಸಿಬ್ಬಂದಿಗಳಾದ ಗೋವಿಂದರಾಜು, ಮುತ್ತುರಾಜು, ಬುಡೇನ್ ವಲಿ ರವರನ್ನು ಒಳಗೊಂಡ ತಂಡ ಮೇಲ್ಕಂಡ ಸ್ಥಳಕ್ಕೆ ದಾಳಿಮಾಡಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 25,000/- ನಗದು ಹಣವನ್ನು ಹಾಗೂ ಮಟ್ಕಾ ಚೀಟಿಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 78(3) ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.
